ಸುಬ್ರಹ್ಮಣ್ಯ: ಬಸ್ಸ್- ಬೈಕ್ ಅಪಘಾತ, ಓರ್ವ ಮೃತ್ಯು; ಮತ್ತೋರ್ವನಿಗೆ ಗಾಯ

ಸುಬ್ರಹ್ಮಣ್ಯ: ಮಾ.೧೦, ಕೇರಳ ರಾಜ್ಯದ ಕೆಎಸ್ಆರ್ಟಿಸಿ ಸಂಸ್ಥೆಯ ಮಲಬಾರ್ ಬಸ್ ಸುಬ್ರಹ್ಮಣ್ಯ ಕ್ಕೆ ಬರುತಿದ್ದು ಹಾಗೂ ಸುಬ್ರಹ್ಮಣ್ಯ ಕಡೆಯಿಂದ ಇಂಜಾಡಿ ಕಡೆ ತೆರಳುತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ದಾರುಣವಾಗಿ ಸಾವನಪ್ಪಿರುವ ಘಟನೆ‌ ನಡೆದಿದೆ , ಮತ್ತೋರ್ವ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಸುಬ್ರಹ್ಮಣ್ಯದ ಇಂಜಾಡಿ ಬಳಿ ನಡೆದಿದೆ.

ಸುಬ್ರಹ್ಮಣ್ಯದ ಕಲ್ಲಗುಡ್ಡೆ ನಿವಾಸಿ ರಮೇಶ್ ಕಲ್ಲಜಡ್ಕ ಮೃತ ವ್ಯಕ್ತಿ, ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ರಮೇಶ್ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅವರಿಗೆ 27 ವರ್ಷ ವಯಸ್ಸಾಗಿತ್ತು. ಮತ್ತೊಬ್ಬ ಗಾಯಾಳು ಸಣ್ಣ ಪುಟ್ಟ ಗಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ