ಪುತ್ತೂರು: ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಬಿಸಿ ದಿನದಿಂದ ದಿನಕ್ಕೆ ಏರುತ್ತಾಯಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಏಪ್ರಿಲ್ 18 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಯ ವಕ್ತಾರರು ಹಾಗೂ ಪ್ರಧಾನ ಕಾರ್ಯದರ್ಶಿ ಮಾಧ್ಯಮ ಮತ್ತು ಸಂವಹನದ ‘ಭವ್ಯ ನರಸಿಂಹ ಮೂರ್ತಿ’ ಜೊತೆಗೂಡಲಿದ್ದಾರೆ. ನಾಳೆ ಬೆಳಿಗ್ಗೆ 9:30ಕ್ಕೆ ಸರಿಯಾಗಿ ಪುತ್ತೂರು ದರ್ಬೆ ಸರ್ಕಲ್ ನಿಂದ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಅಭಿಮಾನಿಗಳೊಂದಿಗೆ ಜೊತೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ‘ಅಶೋಕ್ ಕುಮಾರ್ ರೈ’ ನಾಮಪತ್ರ ಸಲ್ಲಿಸಲಿದ್ದಾರೆ. ಎಂದು ತಿಳಿದು ಬಂದಿದೆ.