ಮಸೀದಿ ಉದ್ಘಾಟಿಸಿದ ಗವಿಮಠದ ಶ್ರೀಗಳು; ರಕ್ತ ಹರಿಸೋದು ಧರ್ಮವಲ್ಲ, ರಕ್ತ ನೀಡೋದು ಧರ್ಮ ಎಂದ ಸ್ವಾಮೀಜಿ!

ಕೊಪ್ಪಳ: ಧರ್ಮದ ಅರ್ಥ ಇನ್ನೊಬ್ಬರ ಮನಸ್ಸಿಗೆ ನೋವು, ಮೋಸ ಮಾಡದೇ ಬದುಕುವುದೇ ನಿಜವಾದ ಧರ್ಮವಂತ ಎಂದು ಸ್ವಾಮೀಜಿ ತಿಳಿಸಿದ್ದಾರೆ. : ರಸ್ತೆಯಲ್ಲಿ ಧರ್ಮಕ್ಕಾಗಿ ರಕ್ತ ಹರಿಸೋದು ಧರ್ಮವಲ್ಲ, ರಸ್ತೆಯಲ್ಲಿ ಒದ್ದಾಡುವವನಿಗೆ ರಕ್ತ ನೀಡುವುದು ಧರ್ಮ ಎಂದು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ. ಭಾವೈಕ್ಯತೆ ಸಂಕೇತವಾಗಿರುವ ಗವಿಮಠ ಸ್ವಾಮೀಜಿ ಅವರು ಕುಕನೂರು ತಾಲೂಕಿನ ಬಾನಾಪುರದಲ್ಲಿ ಮಸೀದಿ ಉದ್ಘಾಟನೆ ಮಾಡಿದ್ದಾರೆ. ಬಾನಾಪುರ ಗ್ರಾಮದಲ್ಲಿ ಕೇವಲ ಐದು ಮುಸ್ಲಿಂ ಕುಟುಂಬಗಳಿದ್ದು, ಎಲ್ಲಾ ಧರ್ಮದವರು ಸೇರಿ ಮಸೀದಿ‌ ನಿರ್ಮಾಣ ಮಾಡಿದ್ದಾರೆ. ಸದ್ಯ ಈ ಮಸೀದಿಯನ್ನು ಸ್ವಾಮೀಜಿಗಲು ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಸ್ವಾಮೀಜಿಗಳು, ಪ್ರಕೃತಿಯಲ್ಲಿ ಸೂರ್ಯನ ಬೆಳಕು. ಗಾಳಿಗೆ ಇಲ್ಲ ಬೇಧ ಭಾವ ಮನುಷ್ಯನಿಗೆ ಯಾಕೆ? ನಿಜವಾಗಿ ಒಬ್ಬೊಬ್ಬರು ಸೌಹಾರ್ದಯುತವಾಗಿ ಬಾಳುವುದು ಧರ್ಮ. ಗುಡಿ, ಮಂದಿರಕ್ಕೆ ಹೋಗಿ ಬಾಳೆ ನೈವೇದ್ಯ ಮಾಡಿ ಹಣ್ಣು ತಿಂದು ಸಿಪ್ಪೆ ಬೀಸಾಡುವುದು ಧರ್ಮವಲ್ಲ. ಬೀಸಾಡಿರುವ ಸಿಪ್ಪೆ ಸ್ವಚ್ಛಗೊಳಿಸುವುದು ಧರ್ಮ. ಇನ್ನೊಬ್ಬರ ಮನಸ್ಸಿಗೆ ನೋವು ಮಾಡದೆ ಇರೋದು ಧರ್ಮ ಎಂದು ಗವಿಸಿದ್ದೇಶ್ವರ ಸ್ವಾಮೀಜಿ ಪ್ರತಿಪಾದಿಸಿದ್ದಾರೆ. ಧರ್ಮ ಎಂದರೆ ಎಲ್ಲರನ್ನು ನೋಡಿ ಸಂತೋಷ ಪಡಬೇಕು. ಪುಟ್ಟ ಗ್ರಾಮದಲ್ಲಿ ಕೇವಲ ಐದು ಮನೆಗಳಿದ್ದರೂ ಸಮನ್ವಯದಿಂದ ಬದುಕು ಸಾಗಿಸುತ್ತಿರುವುದು ಧರ್ಮದ ಸಮನ್ವಯದ ಸಂಕೇತ ಎಂದು ಸ್ವಾಮೀಜಿ ಹೇಳಿದರು. ನಿಸರ್ಗಕ್ಕೆ ಇಲ್ಲದ ಬೇದಭಾವ ಮನುಷ್ಯನ ಮನಸ್ಸಿನಲ್ಲಿ ಹುಟ್ಟಿಸಿದರಲ್ಲ. ಅದು ಒಂದು ತಪ್ಪು ಕಲ್ಪನೆಯಾಗಿದೆ. ನಿಜವಾದ ಧರ್ಮ ಎಂದರೇ ಎಲ್ಲರೂ ಕೂಡಿ ಬದುಕುವುದು ಎಂದು ತಿಳಿಸಿದರು. ಧರ್ಮದ ಅರ್ಥ ಇನ್ನೊಬ್ಬರ ಮನಸ್ಸಿಗೆ ನೋವು, ಮೋಸ ಮಾಡದೇ ಬದುಕುವುದೇ ನಿಜವಾದ ಧರ್ಮವಂತ ಎಂದು ಸ್ವಾಮೀಜಿ ತಿಳಿಸಿದರು. ಮಸೀದಿ ಉದ್ಘಾಟನೆ ಸಂದರ್ಭದಲ್ಲಿ ಗ್ರಾಮಸ್ಥರು ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ