ಕೊಡಗು: ಮುಂದುವರಿದ ಮಳೆ ಆರ್ಭಟ; ಶಾಲಾ ಕಾಲೇಜುಗಳಿಗೆ ನಾಳೆಯೂ(25.07) ರಜೆ ಘೋಷಣೆ – ಕರುನಾಡ ನ್ಯೂಸ್


ಮಡಿಕೇರಿ: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ವಿಪರೀತ ಮಳೆಯಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಿಗೆ(ಪದವಿ ಮತ್ತು ಸ್ನಾತಕೋತ್ತರ ಹೊರತುಪಡಿಸಿ) ನಾಳೆಯೂ (25-07-2023) ಜಿಲ್ಲಾಧಿಕಾರಿ ವೆಂಕಟ್ ರಾಜಾ ರಜೆ ಘೋಷಿಸಿದ್ದಾರೆ.

ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಅಲ್ಲಲ್ಲಿ ಸೇತುವೆ ಸೇರಿದಂತೆ ಗುಡ್ಡ ಕುಸಿದು ಹಾನಿಯಾಗುತ್ತಿರುವ ಬಗ್ಗೆಯೂ ವರದಿಯಾಗುತ್ತಿವೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮುಂಗಾರು ಬಿರುಸುಗೊಳ್ಳುತ್ತಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಲವೆಡೆ ಪ್ರವಾಹದಿಂದಾಗಿ ರಸ್ತೆ ಮತ್ತು ಸೇತುವೆ ಸಂಪರ್ಕ ಕಡಿತಗೊಂಡಿದೆ.





Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ