
ಬಳಿಕ ಮಾತನಾಡಿದ ಅಲೋಕ್ ಕುಮಾರ್, ಇದೇ ಆಗಸ್ಟ್ 1 ರಿಂದ ಎಕ್ಸ್ಪ್ರೆಸ್ವೇನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ನಿಷೇಧ (Two-Wheelers, Three-Wheelers Banned) ಹೇರಲಾಗುವುದು. ಈ ಬಗ್ಗೆ ಕಳೆದ ಜು.12ರಂದೇ ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಆ.1 ರಿಂದ ನೂತನ ನಿಯಮ ಅನ್ವಯ ಆಗಲಿದೆ ಎಂದು ತಿಳಿಸಿದ್ದಾರೆ.
ಎಕ್ಸ್ಪ್ರೆಸ್ ಹೈವೆಯಲ್ಲಿ ಇನ್ನೂ ಸಾಕಷ್ಟು ನ್ಯೂನತೆಗಳು ಹಾಗೆ ಇವೆ. ಅಪಘಾತ ತಡೆಗೆ ಪೊಲೀಸ್ ಇಲಾಖೆ ಸಾಕಷ್ಟು ಕೆಲಸ ಮಾಡಿದೆ. ಹಾಗಾಗಿ ಸಾವಿನ ಸಂಖ್ಯೆ ಕಡಿಮೆ ಆಗಿದೆ. ಆದ್ರೆ ಹೆದ್ದಾರಿ ಪ್ರಾಧಿಕಾರ ಎಂಟ್ರಿ, ಎಕ್ಸಿಟ್ ಸರಿಪಡಿಸುವುದು, ಸ್ಕೈವಾಕ್ ನಿರ್ಮಾಣ ಮಾಡಬೇಕಿದೆ. ನಾವು ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಇರುವ ಸೌಲಭ್ಯ ಬಳಸಿಕೊಂಡು ಕೆಲಸ ಮಾಡುತ್ತಿದ್ದೇವೆ. ಸರ್ಕಾರದ ಮಟ್ಟದಲ್ಲಿ ಟೆಂಡರ್ ಆಗಿರೋದ್ರಿಂದ ಹೊಸ ಉಪಕರಣಗಳು ಬರೋದು ತಡವಾಗುತ್ತದೆ. ಹೆದ್ದಾರಿ ಪ್ರಾಧಿಕಾರಕ್ಕೂ ಕಠಿಣ ಸೂಚನೆ ನೀಡಲಾಗಿದೆ. ಪ್ರಾಧಿಕಾರ ಸುಮ್ಮನೆ ಆಟ ಆಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.