ಕಾಸರಗೋಡು: ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು – ಕರುನಾಡ ನ್ಯೂಸ್


ಕಾಸರಗೋಡು: ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾಸರಗೋಡಿನ ನೀಲೇಶ್ವರ ಬಂಗಳದಲ್ಲಿ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಬಂಗಳ ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಸಹಪಾಠಿಗಳ ಜೊತೆ ಮನೆ ಸಮೀಪದ ಗಣಿಗಾರಿಕೆ ನಡೆಸಿದ್ದ ಸ್ಥಳದಲ್ಲಿ ಹೊಂಡ ದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿಈ ದುರಂತ ನಡೆದಿದೆ ಎನ್ನಲಾಗಿದೆ. ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿಗಾಗಿ ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಮಂಗಳವಾರ ಬೆಳಿಗ್ಗಿನಿಂದ ಕಣ್ಣೂರಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಮುಳುಗು ತಜ್ಞರು ಶೋಧ ನಡೆಸಿ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ ಎಂದು ತಿಳಿದು ಬಂದಿದೆ.

ಒರಿಜಿನಲ್ ಅಥವಾ ಡೂಪ್ಲಿಕೇಟ್ ಹೇಗೆ ಕಂಡುಹಿಡಿಯುವುದು.





Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ